ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
Cross references
ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.