ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
Cross references
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.