ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
Cross references
ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.
ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು