ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
Cross references
ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ನಾಶವಾಗಲಿರುವ ಕಡೇ ಶತ್ರುವು ಮರಣ.
ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.