Home Bibles 2 ತಿಮೋಥೆಯ 1:10 · ಕನ್ನಡ ಬೈಬಲ್
2 ತಿಮೋಥೆಯ 1:10 · ಕನ್ನಡ ಬೈಬಲ್

ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.

Cross references

ಯೆಶಾಯ 25:7

ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.

ಯೆಶಾಯ 43:3

ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

ಯೆಶಾಯ 45:15

ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.

ಯೆಶಾಯ 45:21

ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.

ಯೆಶಾಯ 60:2

ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.

ಹೊಶೇಯ 13:14

ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.

ಲೂಕ 2:11

ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.

ಲೂಕ 2:31

ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.

ಲೂಕ 11:36

ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.

ಲೂಕ 13:7

ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

ಯೋಹಾನ 1:9

ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.

ಯೋಹಾನ 4:42

ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.

ಯೋಹಾನ 5:24

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನ 5:40

ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.

ಯೋಹಾನ 11:25

ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಯೋಹಾನ 20:31

ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಅಪೋಸ್ತಲರ ಕೃತ್ಯಗಳು 5:31

ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 13:23

ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.

ರೋಮಾಪುರದವರಿಗೆ 2:7

ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

ರೋಮಾಪುರದವರಿಗೆ 3:31

ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.

ರೋಮಾಪುರದವರಿಗೆ 5:17

ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

ರೋಮಾಪುರದವರಿಗೆ 6:6

ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.

ರೋಮಾಪುರದವರಿಗೆ 16:26

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

1 ಕೊರಿಂಥದವರಿಗೆ 4:5

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

1 ಕೊರಿಂಥದವರಿಗೆ 15:26

ನಾಶವಾಗಲಿರುವ ಕಡೇ ಶತ್ರುವು ಮರಣ.

1 ಕೊರಿಂಥದವರಿಗೆ 15:53

ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.

2 ಕೊರಿಂಥದವರಿಗೆ 5:4

ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.

ಗಲಾತ್ಯದವರಿಗೆ 5:4

ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.

ಎಫೆಸದವರಿಗೆ 1:9

ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.

ಎಫೆಸದವರಿಗೆ 1:18

ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ

ಕೊಲೊಸ್ಸೆಯವರಿಗೆ 1:26

ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;

2 ತೆಸಲೋನಿಕದವರಿಗೆ 2:8

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

2 ತಿಮೋಥೆಯ 1:1

ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು

ತೀತ 1:3

ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ತೀತ 2:13

ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

ತೀತ 3:4

ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

ಹೆಬ್ರಿಯರಿಗೆ 2:14

ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

ಹೆಬ್ರಿಯರಿಗೆ 10:32

ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

Interlinear

Choose Theme