Home Bibles 2 ತಿಮೋಥೆಯ 1:12 · ಕನ್ನಡ ಬೈಬಲ್
2 ತಿಮೋಥೆಯ 1:12 · ಕನ್ನಡ ಬೈಬಲ್

ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.

Cross references

ಕೀರ್ತನೆಗಳು 9:10

ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.

ಕೀರ್ತನೆಗಳು 25:2

ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.

ಕೀರ್ತನೆಗಳು 31:5

ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.

ಕೀರ್ತನೆಗಳು 56:9

ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.

ಯೆಶಾಯ 12:2

ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.

ಯೆಶಾಯ 50:7

ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.

ಯೆಶಾಯ 54:4

ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.

ನಹೂಮ 1:7

ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.

ಮತ್ತಾಯ 7:22

ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.

ಮತ್ತಾಯ 12:21

ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

ಮತ್ತಾಯ 24:36

ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.

ಲೂಕ 10:12

ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.

ಲೂಕ 23:46

ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.

ಯೋಹಾನ 6:39

ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.

ಯೋಹಾನ 6:44

ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.

ಯೋಹಾನ 10:28

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.

ಯೋಹಾನ 17:11

ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.

ಯೋಹಾನ 17:15

ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.

ಅಪೋಸ್ತಲರ ಕೃತ್ಯಗಳು 7:59

ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

ಅಪೋಸ್ತಲರ ಕೃತ್ಯಗಳು 9:16

ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 13:50

ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

ಅಪೋಸ್ತಲರ ಕೃತ್ಯಗಳು 14:5

ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

ಅಪೋಸ್ತಲರ ಕೃತ್ಯಗಳು 21:13

ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 21:27

ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--

ಅಪೋಸ್ತಲರ ಕೃತ್ಯಗಳು 22:21

ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 5:4

ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.

ರೋಮಾಪುರದವರಿಗೆ 9:33

ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

ರೋಮಾಪುರದವರಿಗೆ 15:12

ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.

1 ಕೊರಿಂಥದವರಿಗೆ 3:13

ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.

ಎಫೆಸದವರಿಗೆ 1:12

ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.

ಎಫೆಸದವರಿಗೆ 3:1

ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು

ಫಿಲಿಪ್ಪಿಯವರಿಗೆ 1:20

ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

ಫಿಲಿಪ್ಪಿಯವರಿಗೆ 3:8

ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.

ಫಿಲಿಪ್ಪಿಯವರಿಗೆ 3:10

ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.

ಫಿಲಿಪ್ಪಿಯವರಿಗೆ 3:21

ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.

1 ತೆಸಲೋನಿಕದವರಿಗೆ 2:16

ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

1 ತೆಸಲೋನಿಕದವರಿಗೆ 5:4

ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.

1 ತಿಮೋಥೆಯ 6:20

ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

Interlinear

Choose Theme