ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
Cross references
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.