ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
Cross references
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.