ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
Cross references
ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.