ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
Cross references
ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.
ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.