ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
Cross references
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.