ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
Cross references
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು