ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
Cross references
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.