ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
Cross references
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.