ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
Cross references
ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.