ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
Cross references
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.