Home Bibles 2 ತಿಮೋಥೆಯ 3:11 · ಕನ್ನಡ ಬೈಬಲ್
2 ತಿಮೋಥೆಯ 3:11 · ಕನ್ನಡ ಬೈಬಲ್

ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.

Cross references

ಆದಿಕಾಂಡ 48:16

ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

2 ಸಮುವೇಲ 22:1

ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--

2 ಸಮುವೇಲ 22:49

ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.

ಯೋಬ 5:19

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

ಕೀರ್ತನೆಗಳು 34:19

ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

ಕೀರ್ತನೆಗಳು 37:40

ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.

ಕೀರ್ತನೆಗಳು 91:2

ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.

ಕೀರ್ತನೆಗಳು 91:14

ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.

ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೆಶಾಯ 41:14

ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್‌ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!

ಯೆಶಾಯ 43:2

ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

ಯೆರೆಮಿಯ 1:19

ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ದಾನಿಯೇಲ 6:27

ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.

ಅಪೋಸ್ತಲರ ಕೃತ್ಯಗಳು 9:16

ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 9:23

ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.

ಅಪೋಸ್ತಲರ ಕೃತ್ಯಗಳು 13:14

ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಪೋಸ್ತಲರ ಕೃತ್ಯಗಳು 13:45

ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

ಅಪೋಸ್ತಲರ ಕೃತ್ಯಗಳು 13:50

ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

ಅಪೋಸ್ತಲರ ಕೃತ್ಯಗಳು 14:1

ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.

ಅಪೋಸ್ತಲರ ಕೃತ್ಯಗಳು 14:5

ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

ಅಪೋಸ್ತಲರ ಕೃತ್ಯಗಳು 14:19

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

ಅಪೋಸ್ತಲರ ಕೃತ್ಯಗಳು 20:19

ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.

ಅಪೋಸ್ತಲರ ಕೃತ್ಯಗಳು 20:23

ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.

ಅಪೋಸ್ತಲರ ಕೃತ್ಯಗಳು 21:32

ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.

ಅಪೋಸ್ತಲರ ಕೃತ್ಯಗಳು 23:10

ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ಅಪೋಸ್ತಲರ ಕೃತ್ಯಗಳು 23:12

ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 25:3

ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

ಅಪೋಸ್ತಲರ ಕೃತ್ಯಗಳು 26:17

ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ಅಪೋಸ್ತಲರ ಕೃತ್ಯಗಳು 26:22

ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ರೋಮಾಪುರದವರಿಗೆ 8:35

ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

1 ಕೊರಿಂಥದವರಿಗೆ 4:9

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.

2 ಕೊರಿಂಥದವರಿಗೆ 1:8

ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

2 ಕೊರಿಂಥದವರಿಗೆ 4:8

ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.

2 ಕೊರಿಂಥದವರಿಗೆ 11:23

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

2 ತಿಮೋಥೆಯ 4:7

ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.

2 ತಿಮೋಥೆಯ 4:17

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಹೆಬ್ರಿಯರಿಗೆ 10:33

ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.

2 ಪೇತ್ರ 2:9

ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

Interlinear

Choose Theme