ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
Cross references
ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ