Home Bibles 2 ತಿಮೋಥೆಯ 3:16 · ಕನ್ನಡ ಬೈಬಲ್
2 ತಿಮೋಥೆಯ 3:16 · ಕನ್ನಡ ಬೈಬಲ್

ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

Cross references

ದ್ವಿತೀಯೋಪದೇಶಕಾಂಡ 4:36

ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.

2 ಸಮುವೇಲ 23:2

ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.

ನೆಹೆಮ್ಯ 9:20

ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.

ಕೀರ್ತನೆಗಳು 19:7

ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಕೀರ್ತನೆಗಳು 119:9

ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.

ಕೀರ್ತನೆಗಳು 119:11

ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.

ಕೀರ್ತನೆಗಳು 119:97

ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.

ಕೀರ್ತನೆಗಳು 119:130

ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.

ಸಾಮೇತಿಗಳು 6:23

ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.

ಸಾಮೇತಿಗಳು 15:10

ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.

ಸಾಮೇತಿಗಳು 15:31

ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.

ಮೀಕ 2:7

ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?

ಮತ್ತಾಯ 13:52

ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.

ಮತ್ತಾಯ 21:42

ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ಮತ್ತಾಯ 22:31

ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--

ಮತ್ತಾಯ 22:43

ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--

ಮತ್ತಾಯ 26:54

ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.

ಮತ್ತಾಯ 26:56

ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಮಾರ್ಕ 12:24

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?

ಮಾರ್ಕ 12:36

ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.

ಯೋಹಾನ 3:20

ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.

ಯೋಹಾನ 10:35

ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.

ಅಪೋಸ್ತಲರ ಕೃತ್ಯಗಳು 1:16

ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

ಅಪೋಸ್ತಲರ ಕೃತ್ಯಗಳು 18:25

ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.

ಅಪೋಸ್ತಲರ ಕೃತ್ಯಗಳು 20:20

ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ

ಅಪೋಸ್ತಲರ ಕೃತ್ಯಗಳು 20:27

ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.

ಅಪೋಸ್ತಲರ ಕೃತ್ಯಗಳು 28:25

ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ರೋಮಾಪುರದವರಿಗೆ 2:20

ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.

ರೋಮಾಪುರದವರಿಗೆ 3:2

ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.

ರೋಮಾಪುರದವರಿಗೆ 4:23

ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ

ರೋಮಾಪುರದವರಿಗೆ 15:4

ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.

1 ಕೊರಿಂಥದವರಿಗೆ 12:7

ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.

ಗಲಾತ್ಯದವರಿಗೆ 3:8

ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಎಫೆಸದವರಿಗೆ 4:11

ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ

ಎಫೆಸದವರಿಗೆ 5:11

ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.

2 ತಿಮೋಥೆಯ 2:25

ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

2 ತಿಮೋಥೆಯ 4:2

ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

ಹೆಬ್ರಿಯರಿಗೆ 3:7

ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಹೆಬ್ರಿಯರಿಗೆ 4:12

ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

ಹೆಬ್ರಿಯರಿಗೆ 11:1

ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.

Interlinear

Choose Theme