ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
Cross references
ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.
ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.