ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
Cross references
ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು