ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
Cross references
ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.