Home Bibles 2 ತಿಮೋಥೆಯ 4:1 · ಕನ್ನಡ ಬೈಬಲ್
2 ತಿಮೋಥೆಯ 4:1 · ಕನ್ನಡ ಬೈಬಲ್

ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

Cross references

ಕೀರ್ತನೆಗಳು 50:6

ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.

ಕೀರ್ತನೆಗಳು 96:13

ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

ಕೀರ್ತನೆಗಳು 98:9

ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

ಮತ್ತಾಯ 16:27

ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

ಮತ್ತಾಯ 25:31

ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

ಲೂಕ 19:12

ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.

ಲೂಕ 19:15

ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.

ಲೂಕ 23:42

ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.

ಯೋಹಾನ 5:22

ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;

ಅಪೋಸ್ತಲರ ಕೃತ್ಯಗಳು 10:42

ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಅಪೋಸ್ತಲರ ಕೃತ್ಯಗಳು 17:31

ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ರೋಮಾಪುರದವರಿಗೆ 2:16

ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.

ರೋಮಾಪುರದವರಿಗೆ 14:9

ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

1 ಕೊರಿಂಥದವರಿಗೆ 4:4

ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.

2 ಕೊರಿಂಥದವರಿಗೆ 5:9

ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.

ಕೊಲೊಸ್ಸೆಯವರಿಗೆ 3:4

ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.

1 ತೆಸಲೋನಿಕದವರಿಗೆ 4:15

ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.

2 ತೆಸಲೋನಿಕದವರಿಗೆ 1:7

ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ

2 ತೆಸಲೋನಿಕದವರಿಗೆ 2:8

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

1 ತಿಮೋಥೆಯ 5:21

ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.

1 ತಿಮೋಥೆಯ 6:13

ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

2 ತಿಮೋಥೆಯ 2:14

ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.

2 ತಿಮೋಥೆಯ 4:8

ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.

ತೀತ 2:13

ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

ಹೆಬ್ರಿಯರಿಗೆ 9:27

ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

1 ಪೇತ್ರ 1:7

ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.

1 ಪೇತ್ರ 4:5

ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.

1 ಪೇತ್ರ 5:4

ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

2 ಪೇತ್ರ 1:11

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

2 ಪೇತ್ರ 1:17

ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.

1 ಯೋಹಾನ 2:28

ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

ಪ್ರಕಟನೆ 1:7

ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

ಪ್ರಕಟನೆ 20:11

ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

Interlinear

Choose Theme