ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
Cross references
ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.