ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
Cross references
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.