ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
Cross references
ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ