ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.
Cross references
ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.