Home Bibles ಅಪೋಸ್ತಲರ ಕೃತ್ಯಗಳು 1:2 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 1:2 · ಕನ್ನಡ ಬೈಬಲ್

ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.

Cross references

ಯೆಶಾಯ 11:2

ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;

ಯೆಶಾಯ 42:1

ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಯೆಶಾಯ 48:16

ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.

ಯೆಶಾಯ 59:20

ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಮತ್ತಾಯ 3:16

ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

ಮತ್ತಾಯ 10:1

ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.

ಮತ್ತಾಯ 12:28

ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

ಮತ್ತಾಯ 28:19

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಮಾರ್ಕ 3:14

ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ

ಮಾರ್ಕ 6:30

ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.

ಮಾರ್ಕ 16:15

ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕ 6:13

ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

ಲೂಕ 9:51

ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

ಲೂಕ 24:45

ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.

ಲೂಕ 24:51

ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.

ಯೋಹಾನ 1:16

ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ಯೋಹಾನ 3:34

ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.

ಯೋಹಾನ 6:62

ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?

ಯೋಹಾನ 6:70

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.

ಯೋಹಾನ 13:1

ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.

ಯೋಹಾನ 13:3

ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು

ಯೋಹಾನ 13:18

ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

ಯೋಹಾನ 16:28

ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.

ಯೋಹಾನ 17:13

ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.

ಯೋಹಾನ 20:17

ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು

ಯೋಹಾನ 20:21

ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

ಅಪೋಸ್ತಲರ ಕೃತ್ಯಗಳು 1:9

ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.

ಅಪೋಸ್ತಲರ ಕೃತ್ಯಗಳು 1:11

ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 1:13

ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.

ಅಪೋಸ್ತಲರ ಕೃತ್ಯಗಳು 10:38

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಅಪೋಸ್ತಲರ ಕೃತ್ಯಗಳು 10:40

ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

ಗಲಾತ್ಯದವರಿಗೆ 1:1

ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ

ಎಫೆಸದವರಿಗೆ 2:20

ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

ಎಫೆಸದವರಿಗೆ 4:8

ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.

1 ತಿಮೋಥೆಯ 3:16

ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

ಹೆಬ್ರಿಯರಿಗೆ 6:19

ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.

ಹೆಬ್ರಿಯರಿಗೆ 9:24

ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.

1 ಪೇತ್ರ 3:22

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

2 ಪೇತ್ರ 3:2

ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.

Interlinear

Choose Theme