ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
Cross references
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.