ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
Cross references
ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.
ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.