ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
Cross references
ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.