ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
Cross references
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.