ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
Cross references
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.