ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
Cross references
ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.