ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
Cross references
ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.