ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
Cross references
ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.