ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
Cross references
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.