ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
Cross references
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.