ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
Cross references
ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ