ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Cross references
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.