ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
Cross references
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.