ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
Cross references
ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.