ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
Cross references
ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.