ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
Cross references
ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು.
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.