ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
Cross references
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.