ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
Cross references
ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.