Home Bibles ಅಪೋಸ್ತಲರ ಕೃತ್ಯಗಳು 13:26 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 13:26 · ಕನ್ನಡ ಬೈಬಲ್

ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

Cross references

2 ದಿನವೃತ್ತಾಂತ 20:7

ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?

ಕೀರ್ತನೆಗಳು 105:6

ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,

ಕೀರ್ತನೆಗಳು 147:19

ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

ಯೆಶಾಯ 41:8

ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;

ಯೆಶಾಯ 46:13

ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.

ಯೆಶಾಯ 48:1

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಯೆಶಾಯ 51:1

ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.

ಮತ್ತಾಯ 3:9

ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯ 10:6

ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

ಲೂಕ 1:69

ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.

ಲೂಕ 1:77

ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 3:26

ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 4:12

ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 5:20

ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 10:35

ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ಅಪೋಸ್ತಲರ ಕೃತ್ಯಗಳು 13:15

ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 13:43

ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 16:17

ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.

ಅಪೋಸ್ತಲರ ಕೃತ್ಯಗಳು 28:28

ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

2 ಕೊರಿಂಥದವರಿಗೆ 5:19

ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.

ಎಫೆಸದವರಿಗೆ 1:13

ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಕೊಲೊಸ್ಸೆಯವರಿಗೆ 1:5

ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.

Interlinear

Choose Theme