ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
Cross references
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.