Home Bibles ಅಪೋಸ್ತಲರ ಕೃತ್ಯಗಳು 13:39 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 13:39 · ಕನ್ನಡ ಬೈಬಲ್

ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

Cross references

ಯೋಬ 9:20

ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.

ಯೋಬ 25:4

ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?

ಕೀರ್ತನೆಗಳು 143:2

ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆರೆಮಿಯ 31:32

ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ಹಬಕ್ಕೂಕ 2:4

ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.

ಲೂಕ 10:25

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಲೂಕ 10:28

ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.

ಲೂಕ 18:14

ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಯೋಹಾನ 1:17

ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ಯೋಹಾನ 5:24

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಅಪೋಸ್ತಲರ ಕೃತ್ಯಗಳು 10:43

ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 3:24

ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

ರೋಮಾಪುರದವರಿಗೆ 4:5

ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ರೋಮಾಪುರದವರಿಗೆ 4:15

ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;

ರೋಮಾಪುರದವರಿಗೆ 4:24

ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

ರೋಮಾಪುರದವರಿಗೆ 5:1

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 5:9

ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 7:9

ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ರೋಮಾಪುರದವರಿಗೆ 8:30

ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

ರೋಮಾಪುರದವರಿಗೆ 9:31

ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

ರೋಮಾಪುರದವರಿಗೆ 10:4

ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

ರೋಮಾಪುರದವರಿಗೆ 10:10

ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

1 ಕೊರಿಂಥದವರಿಗೆ 6:11

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

ಗಲಾತ್ಯದವರಿಗೆ 2:16

ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ

ಗಲಾತ್ಯದವರಿಗೆ 2:19

ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.

ಗಲಾತ್ಯದವರಿಗೆ 3:8

ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಗಲಾತ್ಯದವರಿಗೆ 3:10

ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ಗಲಾತ್ಯದವರಿಗೆ 3:21

ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.

ಗಲಾತ್ಯದವರಿಗೆ 5:3

ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.

ಫಿಲಿಪ್ಪಿಯವರಿಗೆ 3:6

ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.

ಹೆಬ್ರಿಯರಿಗೆ 7:19

ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.

ಹೆಬ್ರಿಯರಿಗೆ 9:9

ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.

ಹೆಬ್ರಿಯರಿಗೆ 10:4

ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.

ಹೆಬ್ರಿಯರಿಗೆ 10:11

ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

Interlinear

Choose Theme