Home Bibles ಅಪೋಸ್ತಲರ ಕೃತ್ಯಗಳು 13:46 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 13:46 · ಕನ್ನಡ ಬೈಬಲ್

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

Cross references

ನಿರ್ಗಮಕಾಂಡ 32:9

ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.

ದ್ವಿತೀಯೋಪದೇಶಕಾಂಡ 32:21

ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

ಸಾಮೇತಿಗಳು 28:1

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

ಯೆಶಾಯ 49:5

ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

ಯೆಶಾಯ 55:5

ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.

ಮತ್ತಾಯ 10:6

ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

ಮತ್ತಾಯ 10:13

ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

ಮತ್ತಾಯ 21:43

ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಮತ್ತಾಯ 22:6

ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.

ಲೂಕ 14:16

ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಯೋಹಾನ 1:11

ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.

ಯೋಹಾನ 4:22

ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.

ಅಪೋಸ್ತಲರ ಕೃತ್ಯಗಳು 3:26

ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 4:13

ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.

ಅಪೋಸ್ತಲರ ಕೃತ್ಯಗಳು 4:29

ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

ಅಪೋಸ್ತಲರ ಕೃತ್ಯಗಳು 7:51

ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ಅಪೋಸ್ತಲರ ಕೃತ್ಯಗಳು 13:5

ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

ಅಪೋಸ್ತಲರ ಕೃತ್ಯಗಳು 13:14

ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಪೋಸ್ತಲರ ಕೃತ್ಯಗಳು 13:26

ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ಅಪೋಸ್ತಲರ ಕೃತ್ಯಗಳು 18:5

ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.

ಅಪೋಸ್ತಲರ ಕೃತ್ಯಗಳು 22:21

ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ಅಪೋಸ್ತಲರ ಕೃತ್ಯಗಳು 26:20

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ಅಪೋಸ್ತಲರ ಕೃತ್ಯಗಳು 28:28

ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 2:10

ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.

ರೋಮಾಪುರದವರಿಗೆ 9:4

ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.

ರೋಮಾಪುರದವರಿಗೆ 10:19

ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.

ರೋಮಾಪುರದವರಿಗೆ 11:11

ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ಎಫೆಸದವರಿಗೆ 6:19

ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಫಿಲಿಪ್ಪಿಯವರಿಗೆ 1:14

ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.

ಹೆಬ್ರಿಯರಿಗೆ 11:34

ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

Interlinear

Choose Theme